ಆನ್
ದತ್ತಿ
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು
ಹಾವೇರಿ: ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆ ನಗರಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಶಾಸಕ ರುದ್ರಪ್ಪ ಲಮಾಣಿ ತಾಯಿ ಭುವನೇಶ್ವರಿ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಗತಿಸಿದರು.
![]() |
ನಗರಕ್ಕೆ ಆಗಮಿಸಿದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆಯನ್ನು ಶಾಸಕ ರುದ್ರಪ್ಪ ಲಮಾಣಿ ಸ್ವಾಗತಿಸಿದರು. |
ನಗರದ ಕೆಪಿಟಿಸಿಎಲ್ ಕಚೇರಿ ಎದುರು ಸೇರಿದ ಕನ್ನಡಾಭಿಮಾನಿಗಳು ಕನ್ನಡ ಜ್ಯೋತಿ ರಥಯಾತ್ರೆ ಆಗಮಿಸುತ್ತಿದ್ದಂತೆ ಜೈಕಾರ್ ಕೂಗಿದರು. ಸ್ವಾತಂತ್ರö್ಯ ಹೋರಾಟಗಾರ ಸಂಗೂರ ಕರಿಯಪ್ಪ ಪುತ್ಥಳಿಯಿಂದ ಆರಂಭವಾದ ಮೆರವಣಿಗೆ ಕಿತ್ತೂರು ಚೆನ್ನಮ್ಮ ವೃತ್ತದವರೆಗೆ ಸಾಗಿ ಬಂದಿತು. ಡೊಳ್ಳಿನ ಮೇಳದ ಕಲಾವಿದರು, ಕನ್ನಡ ಶಲ್ಯ ಧರಿಸಿದ್ದ ಕನ್ನಡಾಭಿಮಾನಿಗಳು ಮತ್ತು ಕನ್ನಡ ಬಾವುಟ ಹಿಡಿದುಕೊಂಡಿದ್ದ ವಿದ್ಯಾರ್ಥಿಗಳು, ಎನ್ಸಿಸಿ ಶಿಬಿರಾರ್ಥಿಗಳು ಮೆರವಣಿಗೆಯುದ್ದಕ್ಕೂ ಸಾಗಿ ಬಂದರು.
![]() |
ಹಾವೇರಿ ನಗರಕ್ಕೆ ಆಗಮಿಸಿದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆ ಸ್ವಾಗತಿಸುವ ವೇಳೆ ಸಾಹಿತಿ ಸತೀಶ ಕುಲಕರ್ಣಿ ಅವರೊಂದಿಗೆ ಕನ್ನಡಾಭಿಮಾನಿಗಳು. |
![]() |
ಹಾವೇರಿ: ನಗರಕ್ಕೆ ಆಗಮಿಸಿದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆಯ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. |
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ